ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೇಳೆಗೆ ನೀವೆಲ್ಲರೂ ನಿಮ್ಮ ಮನೆಯಲ್ಲಿ ದೀಪಾವಳಿ ಆಚರಿಸಬೇಕು. ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಭಗವಾನ್ ರಾಮನ ಭಕ್ತರು ತೊಂದರೆಯಾಗುವಂತ ಯಾವುದೇ ಕಾರ್ಯಗಳನ್ನು ಮಾಡಬಾರದು. ಇದು ನನ್ನ ವಿನಮ್ರ ಮನವಿ ಎಂದು ಪ್ರಧಾನಿ ಮೋದಿ ಹೇಳಿದರು.
ಜನವರಿ 22 ರಂದು ರಾಮ ಮಂದಿರಕ್ಕೆ ಯಾರು ಬರಲು ನಿರ್ಧರಿಸಬೇಡಿ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವಕಾಶ ನೀಡಿ. ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. “ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ” ಎಂದು ಪ್ರಧಾನಿ ಮೋದಿ ಸೂಚಿಸಿದರು.
ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಯಾವುದೆ ಅಡ್ಡಿ ಉಂಟಾಗಬಾರದು. ಜನವರಿ, ಫೆಬ್ರವರಿ ಅಥವಾ ಮುಂದಿನ ವರ್ಷ ಯಾವಾಗ ಬೇಕಾದರು ಬರಬಹುದು. ದೇವಸ್ಥಾನ ಎಲ್ಲಿಯೂ ಹೋಗುವುದಿಲ್ಲ. ಜನವರಿ 22ರಂದು ಬಂದು ದೇವಾಲಯದ ಆಡಳಿತ ಮಂಡಳಿಗೆ ಭಕ್ತರಿಂದ ತೊಂದರೆಯಾಗಬಾರದು. ಜನವರಿ 23 ರ ನಂತರ ಭೇಟಿ ನೀಡಲು ಸುಲಭವಾಗುತ್ತದೆ ಎಂದರು. ಜೊತೆಗೆ ಅಯೋಧ್ಯೆಯನ್ನು ದೇಶದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಅಯೋಧ್ಯೆಯ ಜನರು ಪ್ರತಿಜ್ಞೆ ಮಾಡಬೇಕಾಗಿದೆ ಎಂದಿದ್ದಾರೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…