ರಾಷ್ಟ್ರೀಯ

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಮನೆಯಲ್ಲಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೇಳೆಗೆ ನೀವೆಲ್ಲರೂ ನಿಮ್ಮ ಮನೆಯಲ್ಲಿ ದೀಪಾವಳಿ ಆಚರಿಸಬೇಕು. ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಭಗವಾನ್ ರಾಮನ ಭಕ್ತರು ತೊಂದರೆಯಾಗುವಂತ ಯಾವುದೇ ಕಾರ್ಯಗಳನ್ನು ಮಾಡಬಾರದು. ಇದು ನನ್ನ ವಿನಮ್ರ ಮನವಿ ಎಂದು ಪ್ರಧಾನಿ ಮೋದಿ ಹೇಳಿದರು.

ಜನವರಿ 22 ರಂದು ರಾಮ ಮಂದಿರಕ್ಕೆ ಯಾರು ಬರಲು ನಿರ್ಧರಿಸಬೇಡಿ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವಕಾಶ ನೀಡಿ. ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. “ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ” ಎಂದು ಪ್ರಧಾನಿ ಮೋದಿ ಸೂಚಿಸಿದರು.

ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಯಾವುದೆ ಅಡ್ಡಿ ಉಂಟಾಗಬಾರದು. ಜನವರಿ, ಫೆಬ್ರವರಿ ಅಥವಾ ಮುಂದಿನ ವರ್ಷ ಯಾವಾಗ ಬೇಕಾದರು ಬರಬಹುದು. ದೇವಸ್ಥಾನ ಎಲ್ಲಿಯೂ ಹೋಗುವುದಿಲ್ಲ. ಜನವರಿ 22ರಂದು ಬಂದು ದೇವಾಲಯದ ಆಡಳಿತ ಮಂಡಳಿಗೆ ಭಕ್ತರಿಂದ ತೊಂದರೆಯಾಗಬಾರದು. ಜನವರಿ 23 ರ ನಂತರ ಭೇಟಿ ನೀಡಲು ಸುಲಭವಾಗುತ್ತದೆ ಎಂದರು. ಜೊತೆಗೆ ಅಯೋಧ್ಯೆಯನ್ನು ದೇಶದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಅಯೋಧ್ಯೆಯ ಜನರು ಪ್ರತಿಜ್ಞೆ ಮಾಡಬೇಕಾಗಿದೆ ಎಂದಿದ್ದಾರೆ.

andolanait

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

10 mins ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

20 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

24 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

45 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

49 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

1 hour ago