ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೇಳೆಗೆ ನೀವೆಲ್ಲರೂ ನಿಮ್ಮ ಮನೆಯಲ್ಲಿ ದೀಪಾವಳಿ ಆಚರಿಸಬೇಕು. ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಭಗವಾನ್ ರಾಮನ ಭಕ್ತರು ತೊಂದರೆಯಾಗುವಂತ ಯಾವುದೇ ಕಾರ್ಯಗಳನ್ನು ಮಾಡಬಾರದು. ಇದು ನನ್ನ ವಿನಮ್ರ ಮನವಿ ಎಂದು ಪ್ರಧಾನಿ ಮೋದಿ ಹೇಳಿದರು.
ಜನವರಿ 22 ರಂದು ರಾಮ ಮಂದಿರಕ್ಕೆ ಯಾರು ಬರಲು ನಿರ್ಧರಿಸಬೇಡಿ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವಕಾಶ ನೀಡಿ. ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. “ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ” ಎಂದು ಪ್ರಧಾನಿ ಮೋದಿ ಸೂಚಿಸಿದರು.
ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಯಾವುದೆ ಅಡ್ಡಿ ಉಂಟಾಗಬಾರದು. ಜನವರಿ, ಫೆಬ್ರವರಿ ಅಥವಾ ಮುಂದಿನ ವರ್ಷ ಯಾವಾಗ ಬೇಕಾದರು ಬರಬಹುದು. ದೇವಸ್ಥಾನ ಎಲ್ಲಿಯೂ ಹೋಗುವುದಿಲ್ಲ. ಜನವರಿ 22ರಂದು ಬಂದು ದೇವಾಲಯದ ಆಡಳಿತ ಮಂಡಳಿಗೆ ಭಕ್ತರಿಂದ ತೊಂದರೆಯಾಗಬಾರದು. ಜನವರಿ 23 ರ ನಂತರ ಭೇಟಿ ನೀಡಲು ಸುಲಭವಾಗುತ್ತದೆ ಎಂದರು. ಜೊತೆಗೆ ಅಯೋಧ್ಯೆಯನ್ನು ದೇಶದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಅಯೋಧ್ಯೆಯ ಜನರು ಪ್ರತಿಜ್ಞೆ ಮಾಡಬೇಕಾಗಿದೆ ಎಂದಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…