ರಾಷ್ಟ್ರೀಯ

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಮನೆಯಲ್ಲಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೇಳೆಗೆ ನೀವೆಲ್ಲರೂ ನಿಮ್ಮ ಮನೆಯಲ್ಲಿ ದೀಪಾವಳಿ ಆಚರಿಸಬೇಕು. ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಭಗವಾನ್ ರಾಮನ ಭಕ್ತರು ತೊಂದರೆಯಾಗುವಂತ ಯಾವುದೇ ಕಾರ್ಯಗಳನ್ನು ಮಾಡಬಾರದು. ಇದು ನನ್ನ ವಿನಮ್ರ ಮನವಿ ಎಂದು ಪ್ರಧಾನಿ ಮೋದಿ ಹೇಳಿದರು.

ಜನವರಿ 22 ರಂದು ರಾಮ ಮಂದಿರಕ್ಕೆ ಯಾರು ಬರಲು ನಿರ್ಧರಿಸಬೇಡಿ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವಕಾಶ ನೀಡಿ. ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. “ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ” ಎಂದು ಪ್ರಧಾನಿ ಮೋದಿ ಸೂಚಿಸಿದರು.

ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಯಾವುದೆ ಅಡ್ಡಿ ಉಂಟಾಗಬಾರದು. ಜನವರಿ, ಫೆಬ್ರವರಿ ಅಥವಾ ಮುಂದಿನ ವರ್ಷ ಯಾವಾಗ ಬೇಕಾದರು ಬರಬಹುದು. ದೇವಸ್ಥಾನ ಎಲ್ಲಿಯೂ ಹೋಗುವುದಿಲ್ಲ. ಜನವರಿ 22ರಂದು ಬಂದು ದೇವಾಲಯದ ಆಡಳಿತ ಮಂಡಳಿಗೆ ಭಕ್ತರಿಂದ ತೊಂದರೆಯಾಗಬಾರದು. ಜನವರಿ 23 ರ ನಂತರ ಭೇಟಿ ನೀಡಲು ಸುಲಭವಾಗುತ್ತದೆ ಎಂದರು. ಜೊತೆಗೆ ಅಯೋಧ್ಯೆಯನ್ನು ದೇಶದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಅಯೋಧ್ಯೆಯ ಜನರು ಪ್ರತಿಜ್ಞೆ ಮಾಡಬೇಕಾಗಿದೆ ಎಂದಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

55 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

57 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

60 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago