ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನೋಯ್ಡಾ, ಗುರುಗ್ರಾಮ, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಲಘುವಾದ ಮಳೆ ಸುರಿದಿದೆ. ಇದರಿಂದ ದೆಹಲಿಯಾದ್ಯಂತ ವಿಷಕಾರಿ ಎನಿಸಿಕೊಂಡಿದ್ದ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ.
ಕರ್ತವ್ಯ ಪಥ, ಐಟಿಒ ಮತ್ತು ದೆಹಲಿ-ನೋಯ್ಡಾ ಗಡಿಯ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ತೀವ್ರತೆಯ ಮಳೆ ಸುರಿದಿರುವುದು ವರದಿಯಾಗಿದೆ. ಇದು ಹವಾಮಾನದಲ್ಲಿ ತ್ವರಿತ ಬದಲಾವಣೆಗೆ ಕಾರಣವಾಗಿದೆ. ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ 85 ದಾಖಲಾಗಿದೆ. ಇದು ಗಾಳಿ ಗುಣಮಟ್ಟದ ಸುಧಾರಣೆಯಾಗಿದ್ದು, ಉತ್ತಮ ವಿಭಾಗದಲ್ಲಿ ಬರುತ್ತದೆ.
ನಗರದಲ್ಲಿ ಉಂಟಾಗಿದ್ದ ತೀವ್ರ ವಾಯುಮಾಲಿನ್ಯವನ್ನು ತಗ್ಗಿಸಲು ನವೆಂಬರ್ 20-21 ರಂದು ಮೋಡ ಬಿತ್ತನೆಯ ಮೂಲಕ ಕೃತಕ ಮಳೆ ಸುರಿಸಲು ದೆಹಲಿ ಸರ್ಕಾರದ ಯೋಜಿಸಿತ್ತು. ಇದೀಗ ಸುರಿದಿರುವ ಮಳೆ ತಾತ್ಕಾಲಿಕ ಪರಿಹಾರ ನೀಡಿದ್ದು, ಜನತೆ ನಿಟ್ಟುಸಿರು ಬಿಡುವಂತಾಗಿದೆ.
ದೆಹಲಿ-ಎನ್ಸಿಆರ್ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ, ಕೊಂಚ ಮಂಜು ಮುಸುಕಿದ ವಾತಾವರಣವಿರಲಿದೆ. ಒಂದೆರಡು ಪ್ರದೇಶಗಳಲ್ಲಿ ಹಗುರ ಇಲ್ಲವೇ ತುಂತುರು ಮಳೆಯ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ದೆಹಲಿಯ ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…