ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನೋಯ್ಡಾ, ಗುರುಗ್ರಾಮ, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಲಘುವಾದ ಮಳೆ ಸುರಿದಿದೆ. ಇದರಿಂದ ದೆಹಲಿಯಾದ್ಯಂತ ವಿಷಕಾರಿ ಎನಿಸಿಕೊಂಡಿದ್ದ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ.
ಕರ್ತವ್ಯ ಪಥ, ಐಟಿಒ ಮತ್ತು ದೆಹಲಿ-ನೋಯ್ಡಾ ಗಡಿಯ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ತೀವ್ರತೆಯ ಮಳೆ ಸುರಿದಿರುವುದು ವರದಿಯಾಗಿದೆ. ಇದು ಹವಾಮಾನದಲ್ಲಿ ತ್ವರಿತ ಬದಲಾವಣೆಗೆ ಕಾರಣವಾಗಿದೆ. ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ 85 ದಾಖಲಾಗಿದೆ. ಇದು ಗಾಳಿ ಗುಣಮಟ್ಟದ ಸುಧಾರಣೆಯಾಗಿದ್ದು, ಉತ್ತಮ ವಿಭಾಗದಲ್ಲಿ ಬರುತ್ತದೆ.
ನಗರದಲ್ಲಿ ಉಂಟಾಗಿದ್ದ ತೀವ್ರ ವಾಯುಮಾಲಿನ್ಯವನ್ನು ತಗ್ಗಿಸಲು ನವೆಂಬರ್ 20-21 ರಂದು ಮೋಡ ಬಿತ್ತನೆಯ ಮೂಲಕ ಕೃತಕ ಮಳೆ ಸುರಿಸಲು ದೆಹಲಿ ಸರ್ಕಾರದ ಯೋಜಿಸಿತ್ತು. ಇದೀಗ ಸುರಿದಿರುವ ಮಳೆ ತಾತ್ಕಾಲಿಕ ಪರಿಹಾರ ನೀಡಿದ್ದು, ಜನತೆ ನಿಟ್ಟುಸಿರು ಬಿಡುವಂತಾಗಿದೆ.
ದೆಹಲಿ-ಎನ್ಸಿಆರ್ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ, ಕೊಂಚ ಮಂಜು ಮುಸುಕಿದ ವಾತಾವರಣವಿರಲಿದೆ. ಒಂದೆರಡು ಪ್ರದೇಶಗಳಲ್ಲಿ ಹಗುರ ಇಲ್ಲವೇ ತುಂತುರು ಮಳೆಯ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ದೆಹಲಿಯ ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…