ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನೋಯ್ಡಾ, ಗುರುಗ್ರಾಮ, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಲಘುವಾದ ಮಳೆ ಸುರಿದಿದೆ. ಇದರಿಂದ ದೆಹಲಿಯಾದ್ಯಂತ ವಿಷಕಾರಿ ಎನಿಸಿಕೊಂಡಿದ್ದ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ.
ಕರ್ತವ್ಯ ಪಥ, ಐಟಿಒ ಮತ್ತು ದೆಹಲಿ-ನೋಯ್ಡಾ ಗಡಿಯ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ತೀವ್ರತೆಯ ಮಳೆ ಸುರಿದಿರುವುದು ವರದಿಯಾಗಿದೆ. ಇದು ಹವಾಮಾನದಲ್ಲಿ ತ್ವರಿತ ಬದಲಾವಣೆಗೆ ಕಾರಣವಾಗಿದೆ. ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ 85 ದಾಖಲಾಗಿದೆ. ಇದು ಗಾಳಿ ಗುಣಮಟ್ಟದ ಸುಧಾರಣೆಯಾಗಿದ್ದು, ಉತ್ತಮ ವಿಭಾಗದಲ್ಲಿ ಬರುತ್ತದೆ.
ನಗರದಲ್ಲಿ ಉಂಟಾಗಿದ್ದ ತೀವ್ರ ವಾಯುಮಾಲಿನ್ಯವನ್ನು ತಗ್ಗಿಸಲು ನವೆಂಬರ್ 20-21 ರಂದು ಮೋಡ ಬಿತ್ತನೆಯ ಮೂಲಕ ಕೃತಕ ಮಳೆ ಸುರಿಸಲು ದೆಹಲಿ ಸರ್ಕಾರದ ಯೋಜಿಸಿತ್ತು. ಇದೀಗ ಸುರಿದಿರುವ ಮಳೆ ತಾತ್ಕಾಲಿಕ ಪರಿಹಾರ ನೀಡಿದ್ದು, ಜನತೆ ನಿಟ್ಟುಸಿರು ಬಿಡುವಂತಾಗಿದೆ.
ದೆಹಲಿ-ಎನ್ಸಿಆರ್ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ, ಕೊಂಚ ಮಂಜು ಮುಸುಕಿದ ವಾತಾವರಣವಿರಲಿದೆ. ಒಂದೆರಡು ಪ್ರದೇಶಗಳಲ್ಲಿ ಹಗುರ ಇಲ್ಲವೇ ತುಂತುರು ಮಳೆಯ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ದೆಹಲಿಯ ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…