ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ.
‘ನ.19ರಂದು ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ನಾವು ಸಿಖ್ ಜನರಿಗೆ ಸೂಚಿಸುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನವಿರಲಿದೆ. ಏರ್ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವ ಅಪಾಯಕ್ಕೆ ಸಿಲುಕಲಿದೆ’ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.
ನ.19ರಂದು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮುಚ್ಚಿರಲಿದೆ ಮತ್ತು ಅದರ ಹೆಸರನ್ನು ಬದಲಿಸಲಾಗುವುದು ಎಂದೂ ಪನ್ನುನ್ ಹೇಳಿಕೊಂಡಿದ್ದಾರೆ.
ನ.19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಅಂತಿಮ ಪಂದ್ಯ ನಡೆಯಲಿರುವ ದಿನವೂ ಆಗಿದೆ ಎಂದು ಆತ ಬೆಟ್ಟು ಮಾಡಿದ್ದಾನೆ.
ಪಂಜಾಬ್ ಮತ್ತು ಇತರ ಕಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವ ಪನ್ನುನ್ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯವು 2021, ಫೆ.3ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದು,ಕಳೆದ ವರ್ಷದ ನವಂಬರ್ನಲ್ಲಿ ನ್ಯಾಯಾಲಯವು ಆತನನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿತ್ತು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…