ರಾಷ್ಟ್ರೀಯ

ನ.19ರಂದು ಏರ್‌ಇಂಡಿಯಾದಲ್ಲಿ ಪ್ರಯಾಣಿಸುವವರ ಜೀವಕ್ಕೆ ಅಪಾಯವಿದೆ: ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್‌ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ.

‘ನ.19ರಂದು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ನಾವು ಸಿಖ್ ಜನರಿಗೆ ಸೂಚಿಸುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನವಿರಲಿದೆ. ಏರ್‌ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವ ಅಪಾಯಕ್ಕೆ ಸಿಲುಕಲಿದೆ’ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.

ನ.19ರಂದು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮುಚ್ಚಿರಲಿದೆ ಮತ್ತು ಅದರ ಹೆಸರನ್ನು ಬದಲಿಸಲಾಗುವುದು ಎಂದೂ ಪನ್ನುನ್ ಹೇಳಿಕೊಂಡಿದ್ದಾರೆ.

ನ.19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಅಂತಿಮ ಪಂದ್ಯ ನಡೆಯಲಿರುವ ದಿನವೂ ಆಗಿದೆ ಎಂದು ಆತ ಬೆಟ್ಟು ಮಾಡಿದ್ದಾನೆ.

ಪಂಜಾಬ್ ಮತ್ತು ಇತರ ಕಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವ ಪನ್ನುನ್ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯವು 2021, ಫೆ.3ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದು,ಕಳೆದ ವರ್ಷದ ನವಂಬರ್‌ನಲ್ಲಿ ನ್ಯಾಯಾಲಯವು ಆತನನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿತ್ತು.

https://x.com/OnTheNewsBeat/status/1720711657075486858?s=20

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago