ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ.
‘ನ.19ರಂದು ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ನಾವು ಸಿಖ್ ಜನರಿಗೆ ಸೂಚಿಸುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನವಿರಲಿದೆ. ಏರ್ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವ ಅಪಾಯಕ್ಕೆ ಸಿಲುಕಲಿದೆ’ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.
ನ.19ರಂದು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮುಚ್ಚಿರಲಿದೆ ಮತ್ತು ಅದರ ಹೆಸರನ್ನು ಬದಲಿಸಲಾಗುವುದು ಎಂದೂ ಪನ್ನುನ್ ಹೇಳಿಕೊಂಡಿದ್ದಾರೆ.
ನ.19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಅಂತಿಮ ಪಂದ್ಯ ನಡೆಯಲಿರುವ ದಿನವೂ ಆಗಿದೆ ಎಂದು ಆತ ಬೆಟ್ಟು ಮಾಡಿದ್ದಾನೆ.
ಪಂಜಾಬ್ ಮತ್ತು ಇತರ ಕಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವ ಪನ್ನುನ್ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯವು 2021, ಫೆ.3ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದು,ಕಳೆದ ವರ್ಷದ ನವಂಬರ್ನಲ್ಲಿ ನ್ಯಾಯಾಲಯವು ಆತನನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿತ್ತು.
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…