ರಾಷ್ಟ್ರೀಯ

ನ.19ರಂದು ಏರ್‌ಇಂಡಿಯಾದಲ್ಲಿ ಪ್ರಯಾಣಿಸುವವರ ಜೀವಕ್ಕೆ ಅಪಾಯವಿದೆ: ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್‌ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ.

‘ನ.19ರಂದು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ನಾವು ಸಿಖ್ ಜನರಿಗೆ ಸೂಚಿಸುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನವಿರಲಿದೆ. ಏರ್‌ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವ ಅಪಾಯಕ್ಕೆ ಸಿಲುಕಲಿದೆ’ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.

ನ.19ರಂದು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮುಚ್ಚಿರಲಿದೆ ಮತ್ತು ಅದರ ಹೆಸರನ್ನು ಬದಲಿಸಲಾಗುವುದು ಎಂದೂ ಪನ್ನುನ್ ಹೇಳಿಕೊಂಡಿದ್ದಾರೆ.

ನ.19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಅಂತಿಮ ಪಂದ್ಯ ನಡೆಯಲಿರುವ ದಿನವೂ ಆಗಿದೆ ಎಂದು ಆತ ಬೆಟ್ಟು ಮಾಡಿದ್ದಾನೆ.

ಪಂಜಾಬ್ ಮತ್ತು ಇತರ ಕಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವ ಪನ್ನುನ್ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯವು 2021, ಫೆ.3ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದು,ಕಳೆದ ವರ್ಷದ ನವಂಬರ್‌ನಲ್ಲಿ ನ್ಯಾಯಾಲಯವು ಆತನನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿತ್ತು.

https://x.com/OnTheNewsBeat/status/1720711657075486858?s=20

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago