ರಾಷ್ಟ್ರೀಯ

ಲೋಕಸಭೆ ಭದ್ರತಾಲೋಪ: 5ನೇ ಆರೋಪಿ ಬಂಧನ

ನವದೆಹಲಿ: ನೂತನ ಸಂಸತ್‌ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್‌ ಗ್ಯಾಸ್‌ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ.

ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. ಅಲ್ಲದೇ ಕೆಲವು ತಿಂಗಳ ಹಿಂದೆಯೇ ಸಂಸತ್‌ ಮೇಲೆ ದಾಳಿ ಕುರಿತು ಯೋಜನೆ ರೂಪಿಸಿದ್ದರು ಎಂದು ತನಿಖಾ ವರದಿ ಮೂಲಕ ತಿಳಿದು ಬಂದಿದೆ.

ಅಲ್ಲದೇ ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂಪರ್ಕ ಹೊಂದಿದ್ದರು ಹಾಗೂ ಸಂಸತ್‌ ಭವನದಲ್ಲಿ ವಿಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

6ನೇ ಆರೋಪಿಗೆ ಹುಡುಕಾಟ:
ಸಂಸತ್‌ ಮೇಲೆ ದಾಳಿನಡೆಸುವ ಯೋಜನೆಯನ್ನು 6ನೇ ಆರೋಪಿಯಾದ ವಿಶಾಲ್‌ ಶರ್ಮ ಎಂಬಾತನ ಮನೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಎಲ್ಲಾ ೫ ಆರೋಪಿಗಳಿಗೆ ವಿಶಾಲ್‌ ತನ್ನ ಮನೆಯಲ್ಲೆ ಆಶ್ರಯ ನೀಡಿದ್ದಾ ಎಂದು ತಿಳಿದುಬಂದಿದೆ. ಆದರೇ ಇದೀಗ ೫ ಆರೋಪಿಗಳನ್ನು ಬಂಧಿಸಿದು, 6ನೇ ಆರೋಪಿ ವಿಶಾಲ್‌ ನಾಪತ್ತೆಯಾಗಿದ್ದು ಆತನನ್ನು ಪತ್ತೆ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೇಸತ್ತು ಈ ಕೃತ್ಯಕ್ಕೆ ಮುಂದಾದೆವು:
ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಯಾವುದಕ್ಕೂ ಸೂಕ್ತ ಹಾಗೂ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಉದಾಹರಣೆಗೆ ರೈತರ ಪ್ರತಿಭಟಣೆ ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ನಾವೆಲ್ಲಾ ಬೇಸತ್ತಿದ್ದೇವೆ. ಇದರಿಂದಾಗಿ ನಾವು ಈ ಕೃತ್ಯವೆಸಗಲು ಮುಂದಾಗಿದ್ದೆವು ಎಂದು ವಿಚಾರಣೆ ಸಂದರ್ಭದಲ್ಲಿ ಆರೋಪಿ ಅಮೂಲ್‌ ವಿಚಾರಣಾಧಿಕಾರಿಗೆ ತಿಳಿಸಿದ್ದಾನೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago