ನವದೆಹಲಿ: ನೂತನ ಸಂಸತ್ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್ ಗ್ಯಾಸ್ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ.
ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. ಅಲ್ಲದೇ ಕೆಲವು ತಿಂಗಳ ಹಿಂದೆಯೇ ಸಂಸತ್ ಮೇಲೆ ದಾಳಿ ಕುರಿತು ಯೋಜನೆ ರೂಪಿಸಿದ್ದರು ಎಂದು ತನಿಖಾ ವರದಿ ಮೂಲಕ ತಿಳಿದು ಬಂದಿದೆ.
ಅಲ್ಲದೇ ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂಪರ್ಕ ಹೊಂದಿದ್ದರು ಹಾಗೂ ಸಂಸತ್ ಭವನದಲ್ಲಿ ವಿಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
6ನೇ ಆರೋಪಿಗೆ ಹುಡುಕಾಟ:
ಸಂಸತ್ ಮೇಲೆ ದಾಳಿನಡೆಸುವ ಯೋಜನೆಯನ್ನು 6ನೇ ಆರೋಪಿಯಾದ ವಿಶಾಲ್ ಶರ್ಮ ಎಂಬಾತನ ಮನೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಎಲ್ಲಾ ೫ ಆರೋಪಿಗಳಿಗೆ ವಿಶಾಲ್ ತನ್ನ ಮನೆಯಲ್ಲೆ ಆಶ್ರಯ ನೀಡಿದ್ದಾ ಎಂದು ತಿಳಿದುಬಂದಿದೆ. ಆದರೇ ಇದೀಗ ೫ ಆರೋಪಿಗಳನ್ನು ಬಂಧಿಸಿದು, 6ನೇ ಆರೋಪಿ ವಿಶಾಲ್ ನಾಪತ್ತೆಯಾಗಿದ್ದು ಆತನನ್ನು ಪತ್ತೆ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೇಸತ್ತು ಈ ಕೃತ್ಯಕ್ಕೆ ಮುಂದಾದೆವು:
ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಯಾವುದಕ್ಕೂ ಸೂಕ್ತ ಹಾಗೂ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಉದಾಹರಣೆಗೆ ರೈತರ ಪ್ರತಿಭಟಣೆ ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ನಾವೆಲ್ಲಾ ಬೇಸತ್ತಿದ್ದೇವೆ. ಇದರಿಂದಾಗಿ ನಾವು ಈ ಕೃತ್ಯವೆಸಗಲು ಮುಂದಾಗಿದ್ದೆವು ಎಂದು ವಿಚಾರಣೆ ಸಂದರ್ಭದಲ್ಲಿ ಆರೋಪಿ ಅಮೂಲ್ ವಿಚಾರಣಾಧಿಕಾರಿಗೆ ತಿಳಿಸಿದ್ದಾನೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…