ನವದೆಹಲಿ: ನೂತನ ಸಂಸತ್ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್ ಗ್ಯಾಸ್ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ.
ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. ಅಲ್ಲದೇ ಕೆಲವು ತಿಂಗಳ ಹಿಂದೆಯೇ ಸಂಸತ್ ಮೇಲೆ ದಾಳಿ ಕುರಿತು ಯೋಜನೆ ರೂಪಿಸಿದ್ದರು ಎಂದು ತನಿಖಾ ವರದಿ ಮೂಲಕ ತಿಳಿದು ಬಂದಿದೆ.
ಅಲ್ಲದೇ ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂಪರ್ಕ ಹೊಂದಿದ್ದರು ಹಾಗೂ ಸಂಸತ್ ಭವನದಲ್ಲಿ ವಿಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
6ನೇ ಆರೋಪಿಗೆ ಹುಡುಕಾಟ:
ಸಂಸತ್ ಮೇಲೆ ದಾಳಿನಡೆಸುವ ಯೋಜನೆಯನ್ನು 6ನೇ ಆರೋಪಿಯಾದ ವಿಶಾಲ್ ಶರ್ಮ ಎಂಬಾತನ ಮನೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಎಲ್ಲಾ ೫ ಆರೋಪಿಗಳಿಗೆ ವಿಶಾಲ್ ತನ್ನ ಮನೆಯಲ್ಲೆ ಆಶ್ರಯ ನೀಡಿದ್ದಾ ಎಂದು ತಿಳಿದುಬಂದಿದೆ. ಆದರೇ ಇದೀಗ ೫ ಆರೋಪಿಗಳನ್ನು ಬಂಧಿಸಿದು, 6ನೇ ಆರೋಪಿ ವಿಶಾಲ್ ನಾಪತ್ತೆಯಾಗಿದ್ದು ಆತನನ್ನು ಪತ್ತೆ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೇಸತ್ತು ಈ ಕೃತ್ಯಕ್ಕೆ ಮುಂದಾದೆವು:
ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಯಾವುದಕ್ಕೂ ಸೂಕ್ತ ಹಾಗೂ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಉದಾಹರಣೆಗೆ ರೈತರ ಪ್ರತಿಭಟಣೆ ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ನಾವೆಲ್ಲಾ ಬೇಸತ್ತಿದ್ದೇವೆ. ಇದರಿಂದಾಗಿ ನಾವು ಈ ಕೃತ್ಯವೆಸಗಲು ಮುಂದಾಗಿದ್ದೆವು ಎಂದು ವಿಚಾರಣೆ ಸಂದರ್ಭದಲ್ಲಿ ಆರೋಪಿ ಅಮೂಲ್ ವಿಚಾರಣಾಧಿಕಾರಿಗೆ ತಿಳಿಸಿದ್ದಾನೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…