ಭೋಪಾಲ್ : ಮಧ್ಯಪ್ರದೇಶ ದೇಶದ ಭ್ರಷ್ಟಾಚಾರದ ರಾಜಧಾನಿಯಾಗಿದ್ದು, ಅಲ್ಲಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ರಾಜ್ಯದ ನಿಮಚ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪುತ್ರ ಹಾಗೂ ಮಧ್ಯವರ್ತಿ ಹಲವು ಕೋಟಿ ರೂಪಾಯಿಗಳ ಕುರಿತು ಮಾತನಾಡುತ್ತಿರುವ ವೈರಲ್ ವೀಡಿಯೋ ಉಲ್ಲೇಖಿಸಿ, ಅವರು ನಿಮ್ಮ ಹಣವನ್ನು ಲೂಟಿಗೈಯುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಜತೆಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಜಾತಿ ಗಣತಿ ನಡೆಸಲಾಗುವುದು ಎಂದು ಭರವಸೆಯನ್ನು ರಾಗಾ ನೀಡಿದರು.
ಪಕ್ಷ ಅಧಿಕಾರಕ್ಕೆ ಬಂದರೆ 500 ರೂ.ಗೆ ಎಲ್ಪಿಜಿ ಸಿಲಿಂಡರ್, 2 ಲಕ್ಷ ರೂ. ವರೆಗೆ ರೈತರ ಸಾಲ ಮನ್ನಾ, ಗೋಧಿಗೆ 2,600 ರೂ.ನಿಂದ 3,000 ರೂ. ವರೆಗೆ ಬೆಂಬಲ ಬೆಲೆ, 100 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಸಾಲದ ಕಾರಣಕ್ಕಾಗಿ 18,000 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸಾಲ ಮನ್ನಾ ಪ್ರಾರಂಭಿಸಿದಾಗ, ತಮ್ಮ ಸರಕಾರವನ್ನು ಬಿಜೆಪಿ ಅಪಹರಿಸಿತು ಎಂದು ಅವರು ಹೇಳಿದರು.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ರೂಪಿಸಿತು. ಅದೇ ಕ್ಷಣದಿಂದ 27 ಲಕ್ಷ ಕೃಷಿಕರ ಸಾಲ ಮನ್ನಾ ಮಾಡುವ ಮೂಲಕ ರೈತರಿಗಾಗಿ ಕೆಲಸ ಮಾಡಲು ಆರಂಭಿಸಿತು. ಬಿಜೆಪಿ ದೊಡ್ಡ ಕೈಗಾರಿಕೋದ್ಯಮಿಗಳೊಂದಿಗೆ ಶಾಮೀಲಾಗಿ ರೈತರ, ಕಾರ್ಮಿಕರ ಹಾಗೂ ಅಂಗಡಿ ಮಾಲಿಕರ ಸರಕಾರವನ್ನು ಅಪಹರಿಸಿತು ಹಾಗೂ ಅಧಿಕಾರಕ್ಕೆ ಬಂತು ಎಂದು ರಾಹುಲ್ ಗಾಂಧಿ ಹೇಳಿದರು
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…