ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ.
ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 ಮಂದಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜನವರಿ 14, 15 ರಂದು ಶಬರಿಮಲೆಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುವ ನಿರೀಕ್ಷೆ ಇರುವುದರಿಂದ ಅಂದಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಯಾತ್ರೆ ಕೈ ಬಿಡಬೇಕೆಂದು ಮನವಿ ಮಾಡಲಾಗಿದೆ.
ಜನವರಿ 16 ರಿಂದ 20ರವರೆಗೆ ಹೆಚ್ಚಿನ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಮಕರ ಜ್ಯೋತಿಗೆ ಮೂರು ದಿನ ಮೊದಲು ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಯ ವಿವಿಧ ಸ್ಥಳಗಳಲ್ಲಿ ತಂಗುತ್ತಾರೆ. ಮಕರ ಜ್ಯೋತಿ ಮತ್ತು ತಿರುವಾಭರಣ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ತಂಗುವುದರಿಂದ ಮಕರ ಜ್ಯೋತಿ ವೀಕ್ಷಣೆ, ಭದ್ರತೆ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…