ರಾಷ್ಟ್ರೀಯ

ಮಕರ ಜ್ಯೋತಿ ಉತ್ಸವಕ್ಕೆ ಭಕ್ತರಿಗೆ ನಿರ್ಬಂಧ !

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ.

ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 ಮಂದಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜನವರಿ 14, 15 ರಂದು ಶಬರಿಮಲೆಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುವ ನಿರೀಕ್ಷೆ ಇರುವುದರಿಂದ ಅಂದಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಯಾತ್ರೆ ಕೈ ಬಿಡಬೇಕೆಂದು ಮನವಿ ಮಾಡಲಾಗಿದೆ.

ಜನವರಿ 16 ರಿಂದ 20ರವರೆಗೆ ಹೆಚ್ಚಿನ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.

ಸಾಮಾನ್ಯವಾಗಿ ಮಕರ ಜ್ಯೋತಿಗೆ ಮೂರು ದಿನ ಮೊದಲು ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಯ ವಿವಿಧ ಸ್ಥಳಗಳಲ್ಲಿ ತಂಗುತ್ತಾರೆ. ಮಕರ ಜ್ಯೋತಿ ಮತ್ತು ತಿರುವಾಭರಣ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ತಂಗುವುದರಿಂದ ಮಕರ ಜ್ಯೋತಿ ವೀಕ್ಷಣೆ, ಭದ್ರತೆ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago