ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಿಗೆ ಕಾರಣವಾಗಿದೆ. ನಿನ್ನೆ ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಇಂದು ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿದೆ.
ನಿನ್ನೆ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ. ಇತಿಹಾಸದಲ್ಲಿ ಎರಡು ದಿನಗಳಲ್ಲಿ 141 ಸಂಸದರನ್ನು ಅಮಾನತುಗೊಳಿಸಿರುವುದು ಇದೇ ಮೊದಲು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…