ರಾಷ್ಟ್ರೀಯ

ಅಡ್ವಾಣಿಗೆ ಭಾರತರತ್ನ ವಿರುದ್ಧ ಮೌಲಾನಾ ತೌಕೀರ್ ರಝಾ ಕಿಡಿ !

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದರಿಂದ, ಆ ಪ್ರಶಸ್ತಿಗೆ ಮಾಡಿದ ಘೋರ ಅವಮಾನವಾಗಿದೆ. ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವ ಹಿನ್ನೆಲೆಯಲ್ಲಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದ್ದಾರೆ.

ಭಾರತದಲ್ಲಿ ದ್ವೇಷ, ಅಪ್ರಾಮಾಣಿಕತೆ, ಅನ್ಯಾಯ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಅಡ್ವಾಣಿ ಜವಾಬ್ದಾರರಾಗಿದ್ದಾರೆ. ಮುಸಲ್ಮಾನರಿಗೆ ದೇಶದಲ್ಲಿ ಮತಾಂಧತೆ ಮತ್ತು ಯುದ್ಧದ ವಾತಾವರಣ ಬೇಕಾಗಿಲ್ಲ.

ಮಸೀದಿಗಳನ್ನು ಕೆಡವಬೇಕು, ಮುಸ್ಲಿಮರನ್ನು ಕೊಲ್ಲಬೇಕು, ಅವರನ್ನು ಅವಮಾನಿಸಬೇಕು, ಅವರ ಹೆಣ್ಣುಮಕ್ಕಳ ದಾರಿ ತಪ್ಪಿಸಬೇಕು ಇದು ನಮಗೆ ಅಪೇಕ್ಷಿತವಿಲ್ಲ.

ಜಮಾತೆ ಇಸ್ಲಾಮಿ ಹಿಂದ’ನ ಕಾರ್ಯದರ್ಶಿ ಮಲಿಕ ಮೊಹತಸೀಮ ಖಾನ ಇವರೂ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದಾರೆ. ಅವರು ಮಾತನಾಡಿ, ಈಗಿನ ಸರಕಾರದಿಂದ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಜನರನ್ನೇ ಗೌರವಿಸುತ್ತದೆ ಎಂದು ನಿರೀಕ್ಷಿಸಬಹುದು.

ಕೇಂದ್ರ ಸರಕಾರ ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದೆ. ಯಾರಿಗೆ ಶಾಂತಿ ಬೇಡವಾಗಿದೆಯೋ, ಅಂತಹವರಿಗೆ ಈಗಿನ ಸರಕಾರ ಬಹುಮಾನ ನೀಡುತ್ತದೆ. ಸದ್ಯದ ಸರಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆಯೇ, ಎಂದು ದೇಶದ ಜನತೆ ವಿಚಾರ ಮಾಡಬೇಕು ಎಂದರು.

andolanait

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

58 mins ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

2 hours ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

3 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

3 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

3 hours ago