ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದರಿಂದ, ಆ ಪ್ರಶಸ್ತಿಗೆ ಮಾಡಿದ ಘೋರ ಅವಮಾನವಾಗಿದೆ. ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವ ಹಿನ್ನೆಲೆಯಲ್ಲಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದ್ದಾರೆ.
ಭಾರತದಲ್ಲಿ ದ್ವೇಷ, ಅಪ್ರಾಮಾಣಿಕತೆ, ಅನ್ಯಾಯ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಅಡ್ವಾಣಿ ಜವಾಬ್ದಾರರಾಗಿದ್ದಾರೆ. ಮುಸಲ್ಮಾನರಿಗೆ ದೇಶದಲ್ಲಿ ಮತಾಂಧತೆ ಮತ್ತು ಯುದ್ಧದ ವಾತಾವರಣ ಬೇಕಾಗಿಲ್ಲ.
ಮಸೀದಿಗಳನ್ನು ಕೆಡವಬೇಕು, ಮುಸ್ಲಿಮರನ್ನು ಕೊಲ್ಲಬೇಕು, ಅವರನ್ನು ಅವಮಾನಿಸಬೇಕು, ಅವರ ಹೆಣ್ಣುಮಕ್ಕಳ ದಾರಿ ತಪ್ಪಿಸಬೇಕು ಇದು ನಮಗೆ ಅಪೇಕ್ಷಿತವಿಲ್ಲ.
ಜಮಾತೆ ಇಸ್ಲಾಮಿ ಹಿಂದ’ನ ಕಾರ್ಯದರ್ಶಿ ಮಲಿಕ ಮೊಹತಸೀಮ ಖಾನ ಇವರೂ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದಾರೆ. ಅವರು ಮಾತನಾಡಿ, ಈಗಿನ ಸರಕಾರದಿಂದ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಜನರನ್ನೇ ಗೌರವಿಸುತ್ತದೆ ಎಂದು ನಿರೀಕ್ಷಿಸಬಹುದು.
ಕೇಂದ್ರ ಸರಕಾರ ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದೆ. ಯಾರಿಗೆ ಶಾಂತಿ ಬೇಡವಾಗಿದೆಯೋ, ಅಂತಹವರಿಗೆ ಈಗಿನ ಸರಕಾರ ಬಹುಮಾನ ನೀಡುತ್ತದೆ. ಸದ್ಯದ ಸರಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆಯೇ, ಎಂದು ದೇಶದ ಜನತೆ ವಿಚಾರ ಮಾಡಬೇಕು ಎಂದರು.
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…