ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದರಿಂದ, ಆ ಪ್ರಶಸ್ತಿಗೆ ಮಾಡಿದ ಘೋರ ಅವಮಾನವಾಗಿದೆ. ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವ ಹಿನ್ನೆಲೆಯಲ್ಲಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದ್ದಾರೆ.
ಭಾರತದಲ್ಲಿ ದ್ವೇಷ, ಅಪ್ರಾಮಾಣಿಕತೆ, ಅನ್ಯಾಯ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಅಡ್ವಾಣಿ ಜವಾಬ್ದಾರರಾಗಿದ್ದಾರೆ. ಮುಸಲ್ಮಾನರಿಗೆ ದೇಶದಲ್ಲಿ ಮತಾಂಧತೆ ಮತ್ತು ಯುದ್ಧದ ವಾತಾವರಣ ಬೇಕಾಗಿಲ್ಲ.
ಮಸೀದಿಗಳನ್ನು ಕೆಡವಬೇಕು, ಮುಸ್ಲಿಮರನ್ನು ಕೊಲ್ಲಬೇಕು, ಅವರನ್ನು ಅವಮಾನಿಸಬೇಕು, ಅವರ ಹೆಣ್ಣುಮಕ್ಕಳ ದಾರಿ ತಪ್ಪಿಸಬೇಕು ಇದು ನಮಗೆ ಅಪೇಕ್ಷಿತವಿಲ್ಲ.
ಜಮಾತೆ ಇಸ್ಲಾಮಿ ಹಿಂದ’ನ ಕಾರ್ಯದರ್ಶಿ ಮಲಿಕ ಮೊಹತಸೀಮ ಖಾನ ಇವರೂ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದಾರೆ. ಅವರು ಮಾತನಾಡಿ, ಈಗಿನ ಸರಕಾರದಿಂದ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಜನರನ್ನೇ ಗೌರವಿಸುತ್ತದೆ ಎಂದು ನಿರೀಕ್ಷಿಸಬಹುದು.
ಕೇಂದ್ರ ಸರಕಾರ ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದೆ. ಯಾರಿಗೆ ಶಾಂತಿ ಬೇಡವಾಗಿದೆಯೋ, ಅಂತಹವರಿಗೆ ಈಗಿನ ಸರಕಾರ ಬಹುಮಾನ ನೀಡುತ್ತದೆ. ಸದ್ಯದ ಸರಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆಯೇ, ಎಂದು ದೇಶದ ಜನತೆ ವಿಚಾರ ಮಾಡಬೇಕು ಎಂದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…