ರಾಷ್ಟ್ರೀಯ

ಅಡ್ವಾಣಿಗೆ ಭಾರತರತ್ನ ವಿರುದ್ಧ ಮೌಲಾನಾ ತೌಕೀರ್ ರಝಾ ಕಿಡಿ !

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದರಿಂದ, ಆ ಪ್ರಶಸ್ತಿಗೆ ಮಾಡಿದ ಘೋರ ಅವಮಾನವಾಗಿದೆ. ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವ ಹಿನ್ನೆಲೆಯಲ್ಲಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದ್ದಾರೆ.

ಭಾರತದಲ್ಲಿ ದ್ವೇಷ, ಅಪ್ರಾಮಾಣಿಕತೆ, ಅನ್ಯಾಯ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಅಡ್ವಾಣಿ ಜವಾಬ್ದಾರರಾಗಿದ್ದಾರೆ. ಮುಸಲ್ಮಾನರಿಗೆ ದೇಶದಲ್ಲಿ ಮತಾಂಧತೆ ಮತ್ತು ಯುದ್ಧದ ವಾತಾವರಣ ಬೇಕಾಗಿಲ್ಲ.

ಮಸೀದಿಗಳನ್ನು ಕೆಡವಬೇಕು, ಮುಸ್ಲಿಮರನ್ನು ಕೊಲ್ಲಬೇಕು, ಅವರನ್ನು ಅವಮಾನಿಸಬೇಕು, ಅವರ ಹೆಣ್ಣುಮಕ್ಕಳ ದಾರಿ ತಪ್ಪಿಸಬೇಕು ಇದು ನಮಗೆ ಅಪೇಕ್ಷಿತವಿಲ್ಲ.

ಜಮಾತೆ ಇಸ್ಲಾಮಿ ಹಿಂದ’ನ ಕಾರ್ಯದರ್ಶಿ ಮಲಿಕ ಮೊಹತಸೀಮ ಖಾನ ಇವರೂ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದಾರೆ. ಅವರು ಮಾತನಾಡಿ, ಈಗಿನ ಸರಕಾರದಿಂದ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಜನರನ್ನೇ ಗೌರವಿಸುತ್ತದೆ ಎಂದು ನಿರೀಕ್ಷಿಸಬಹುದು.

ಕೇಂದ್ರ ಸರಕಾರ ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದೆ. ಯಾರಿಗೆ ಶಾಂತಿ ಬೇಡವಾಗಿದೆಯೋ, ಅಂತಹವರಿಗೆ ಈಗಿನ ಸರಕಾರ ಬಹುಮಾನ ನೀಡುತ್ತದೆ. ಸದ್ಯದ ಸರಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆಯೇ, ಎಂದು ದೇಶದ ಜನತೆ ವಿಚಾರ ಮಾಡಬೇಕು ಎಂದರು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago