ರಾಷ್ಟ್ರೀಯ

ದಲಿತ ಬಾಲಕಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ದುಷ್ಕರ್ಮಿಗಳು!

ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.

ಬಾಲಕಿ ಎಣ್ಣೆ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಗಿರಣಿ ಮಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಾಲಕಿಯ ಸಹೋದರ ನೀಡಿದ ದೂರಿನ ಪ್ರಕಾರ, ಆಕೆ ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದಾಗ ಆಕೆ ಪ್ರತಿಭಟಿಸಿದ್ದಾಳೆ. ರೊಚ್ಚಿಗೆದ್ದ ಆರೋಪಿಗಳು ಜಾತಿ ನಿಂದನೆ ಮಾಡಿ, ನಂತರ ಅವಳನ್ನು ಬಿಸಿ ಎಣ್ಣೆ ತುಂಬಿದ ಕಡಾಯಿಗೆ ತಳ್ಳಿದ್ದಾರೆ ಎಂದು ಆಕೆಯ ಸಹೋದರ ಹೇಳಿದ್ದಾರೆ.

ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ನಿಂದಿಸಿದ ಬಳಿಕ ಬಿಸಿ ಎಣ್ಣೆಗೆ ದೂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.

ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

6 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

6 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

7 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

7 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

8 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

8 hours ago