ರಾಷ್ಟ್ರೀಯ

ದಲಿತ ಬಾಲಕಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ದುಷ್ಕರ್ಮಿಗಳು!

ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.

ಬಾಲಕಿ ಎಣ್ಣೆ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಗಿರಣಿ ಮಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಾಲಕಿಯ ಸಹೋದರ ನೀಡಿದ ದೂರಿನ ಪ್ರಕಾರ, ಆಕೆ ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದಾಗ ಆಕೆ ಪ್ರತಿಭಟಿಸಿದ್ದಾಳೆ. ರೊಚ್ಚಿಗೆದ್ದ ಆರೋಪಿಗಳು ಜಾತಿ ನಿಂದನೆ ಮಾಡಿ, ನಂತರ ಅವಳನ್ನು ಬಿಸಿ ಎಣ್ಣೆ ತುಂಬಿದ ಕಡಾಯಿಗೆ ತಳ್ಳಿದ್ದಾರೆ ಎಂದು ಆಕೆಯ ಸಹೋದರ ಹೇಳಿದ್ದಾರೆ.

ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ನಿಂದಿಸಿದ ಬಳಿಕ ಬಿಸಿ ಎಣ್ಣೆಗೆ ದೂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.

ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago