ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.
ಬಾಲಕಿ ಎಣ್ಣೆ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಗಿರಣಿ ಮಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಲಕಿಯ ಸಹೋದರ ನೀಡಿದ ದೂರಿನ ಪ್ರಕಾರ, ಆಕೆ ಧನೂರ ಸಿಲ್ವರ್ನಗರ ಗ್ರಾಮದ ಆಯಿಲ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದಾಗ ಆಕೆ ಪ್ರತಿಭಟಿಸಿದ್ದಾಳೆ. ರೊಚ್ಚಿಗೆದ್ದ ಆರೋಪಿಗಳು ಜಾತಿ ನಿಂದನೆ ಮಾಡಿ, ನಂತರ ಅವಳನ್ನು ಬಿಸಿ ಎಣ್ಣೆ ತುಂಬಿದ ಕಡಾಯಿಗೆ ತಳ್ಳಿದ್ದಾರೆ ಎಂದು ಆಕೆಯ ಸಹೋದರ ಹೇಳಿದ್ದಾರೆ.
ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ನಿಂದಿಸಿದ ಬಳಿಕ ಬಿಸಿ ಎಣ್ಣೆಗೆ ದೂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.
ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…