ರಾಷ್ಟ್ರೀಯ

ಮಿಜೋರಾಂ ಮತ ಏಣಿಕೆ :11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ

ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

ಎಕ್ಸಿಟ್ ಪೋಲ್ ಪ್ರಕಾರ ಕಳೆದ ಬಾರಿ 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ ಬಾರಿ ಅರ್ಧದಷ್ಟನ್ನು ದಾಟಲು ಹೆಣಗಾಡುವುದಾಗಿ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಅಂಚೆ ಮತಪತ್ರಗಳ ಲೆಕ್ಕಾಚಾರ ನಡೆಯುತ್ತಿದ್ದು, ಝಡ್​ಪಿಎಂ 11 ಸ್ಥಾನಗಳಲ್ಲಿ, ಮಿಜೋ ನ್ಯಾಷನಲ್ ಫ್ರಂಟ್ (MNF) 8 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿ ಮಿಜೋ ನ್ಯಾಷನಲ್ ಫ್ರಂಟ್ (MNF), ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.

ಮತ ಎಣಿಕೆಗೂ ಮುನ್ನ ಹೊರಬಿದ್ದ ಬಹುತೇಕ ಎಕ್ಸಿಟ್ ಪೋಲ್ ಗಳು ಯಾವುದೇ ಪಕ್ಷಕ್ಕೆ ಬಹುಮತ ನೀಡಿಲ್ಲ. ಎಬಿಪಿ-ಸಿ ವೋಟರ್ ಎಕ್ಸಿಟ್ ಪೋಲ್ ಪ್ರಕಾರ, ಎಂಎನ್‌ಪಿ 15 ರಿಂದ 21 ಸ್ಥಾನಗಳನ್ನು, ಕಾಂಗ್ರೆಸ್ 2 ರಿಂದ 8, ಜಿಪಿಎಂ 12 ರಿಂದ 18 ಮತ್ತು ಇತರರು 0 ರಿಂದ 5 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago