ರಾಷ್ಟ್ರೀಯ

ಆಯೋಧ್ಯೆಯಲ್ಲಿ ಮೋದಿ ಹವಾ : ಬೃಹತ್‌ ರೋಡ್‌ ಶೋ

ಅಯೋಧ್ಯೆ:   ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದ್ದಾರೆ.

ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶಾದ್ಯಂತದ ವಿವಿಧ ಕಲಾವಿದರ ತಂಡಶನಿವಾರ ಸ್ವಾಗತಿಸಿದವು.

ಅಯೋಧ್ಯೆಯ ಪ್ರಮುಖ ರಸ್ತೆಯಲ್ಲಿ ಮೋದಿ ಬರೋಬ್ಬರಿ 15 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರಾಮಪತ್ ಮಾರ್ಗದ ಮೂಲಕ ಪ್ರಧಾನಿ ಮೋದಿ ರೋಡ್ ಶೋ ಸಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ಪ್ರಧಾನಿ ಮೋದಿಯನ್ನು ವೀಕ್ಷಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಬೀಸುತ್ತಾ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ.

15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಜಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಇತರ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಆರು ವಂದೇ ಭಾರತ್, ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ರೈಲು ಯೋಜನೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬೆಳಿಗ್ಗೆ 11:15 ರ ಸುಮಾರಿಗೆ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಇತರ ನಿರ್ಣಾಯಕ ಯೋಜನೆಗಳಲ್ಲಿ ಅವರು ಅಯೋಧ್ಯೆ ವಿಮಾನ ನಿಲ್ದಾಣ, ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

andolanait

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

17 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

1 hour ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago