ಅಯೋಧ್ಯೆ: ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದ್ದಾರೆ.
ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶಾದ್ಯಂತದ ವಿವಿಧ ಕಲಾವಿದರ ತಂಡಶನಿವಾರ ಸ್ವಾಗತಿಸಿದವು.
ಅಯೋಧ್ಯೆಯ ಪ್ರಮುಖ ರಸ್ತೆಯಲ್ಲಿ ಮೋದಿ ಬರೋಬ್ಬರಿ 15 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರಾಮಪತ್ ಮಾರ್ಗದ ಮೂಲಕ ಪ್ರಧಾನಿ ಮೋದಿ ರೋಡ್ ಶೋ ಸಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ಪ್ರಧಾನಿ ಮೋದಿಯನ್ನು ವೀಕ್ಷಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಬೀಸುತ್ತಾ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ.
15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಜಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಇತರ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಆರು ವಂದೇ ಭಾರತ್, ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ರೈಲು ಯೋಜನೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬೆಳಿಗ್ಗೆ 11:15 ರ ಸುಮಾರಿಗೆ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಇತರ ನಿರ್ಣಾಯಕ ಯೋಜನೆಗಳಲ್ಲಿ ಅವರು ಅಯೋಧ್ಯೆ ವಿಮಾನ ನಿಲ್ದಾಣ, ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…