Mysore
32
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆ

ನವದೆಹಲಿ : ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.

ಸದನದ ಈ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಸಂಸದೆ ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಳ್ಳುತ್ತದೆ.

ಹಾಗಾಗಿ ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಿದ ಬಳಿಕ ಸದನದ ಕಲಾಪಗಳನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.

ಸದನದಲ್ಲಿ ನಿರ್ಣಯ ಅಂಗೀಕರಿಸುತ್ತಿದ್ದಂತೆ ವಿಪಕ್ಷಗಳು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!