ರಾಷ್ಟ್ರೀಯ

ಎಂವಿ ಲೀಲಾ ಹಡಗು ರಕ್ಷಣೆ: ಭಾರತೀಯರೂ ಸೇರಿದಂತೆ ೨೧ ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ!

 ನವದೆಹಲಿ : ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಸೇರಿದಂತೆ ಒಟ್ಟು ೨೧ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್’ನ್ನ ಸಮೀಪಿಸಿ ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ ಮಾಡುವಂತೆ ಭಾರತೀಯ ನೌಕಾಪಡೆ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಿತು.

ಹಡಗಿನಲ್ಲಿದ್ದ ಭಾರತೀಯ ತಂಡ ಸುರಕ್ಷಿತವಾಗಿದೆ. ಮೆರೈನ್ ಕಮಾಂಡೋ ಮಾರ್ಕೋಸ್ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.

ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ನಿನ್ನೆ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿತ್ತು. ಇದರಲ್ಲಿ 15 ಭಾರತೀಯರಿದ್ದರು. ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು ಎನ್ನಲಾಗಿದೆ.

ಅರೇಬಿಯನ್ ಸಮುದ್ರದಲ್ಲಿ ಈ ಕಡಲ ಘಟನೆಗೆ ಭಾರತೀಯ ನೌಕಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಇದರಲ್ಲಿ ಲೈಬೀರಿಯನ್ ಧ್ವಜ ಹೊಂದಿರುವ ಹಡಗನ್ನು ಅಪಹರಿಸುವ ಪ್ರಯತ್ನ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಸುಮಾರು ಐದರಿಂದ ಆರು ಅಪರಿಚಿತ ಸಶಸ್ತ್ರ ವ್ಯಕ್ತಿಗಳು ಹಡಗನ್ನು ಹತ್ತಿದ್ದಾರೆ ಎಂದು ಹಡಗು ಯುಕೆಎಂಟಿಒ ಪೋರ್ಟಲ್ಗೆ ಸಂದೇಶ ಕಳುಹಿಸಿದೆ ಎಂದು ಅವರು ಹೇಳಿದರು.

ಅರೇಬಿ ಸಮುದ್ನಾರಕ್ಲ್ಕುಕಿಳಿದ ಭಾರತದ ಶಕ್ತಿಶಾಲಿ  ಮೂರು ಹಡಗು: ಅರಬೀ ಸಮುದ್ರದಲ್ಲಿ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಲು ಭಾರತದ ಐಎನ್‌ಎಸ್‌ ಚೆನೈ, ಐಎನ್‌ಎಸ್‌ ಮರ್ಮಗೋವ ಮತ್ತು ಐಎನ್‌ಎಸ್‌ ವಿಶಾಕಪಟ್ಟಣಂ ಎಂಬ ಮೂರು ಶಕ್ತಿಶಾಲಿ ನೌಕೆಗಳನ್ನು ಸಮುದ್ರಕ್ಕಿಳಿಸಿದೆ. ಅಪಹೃಣಕ್ಕೊಳಗಾಗಿದ್ದ ಎಂ ವಿ ಲೀಲಾ ರಕ್ಷಣೆ ಸೇರಿದಂತೆ ಸರಕು ಸಾಗಾಣೆ ಮಾಡುವ ಹಡಗುಗಳಿಗೆ ರಕ್ಷಣೆ ನೀಡಲಾಗುತ್ತಿದೆ.

 

andolanait

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

2 hours ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

2 hours ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

2 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

10 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago