ರಾಷ್ಟ್ರೀಯ

ಎಂವಿ ಲೀಲಾ ಹಡಗು ರಕ್ಷಣೆ: ಭಾರತೀಯರೂ ಸೇರಿದಂತೆ ೨೧ ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ!

 ನವದೆಹಲಿ : ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಸೇರಿದಂತೆ ಒಟ್ಟು ೨೧ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್’ನ್ನ ಸಮೀಪಿಸಿ ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ ಮಾಡುವಂತೆ ಭಾರತೀಯ ನೌಕಾಪಡೆ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಿತು.

ಹಡಗಿನಲ್ಲಿದ್ದ ಭಾರತೀಯ ತಂಡ ಸುರಕ್ಷಿತವಾಗಿದೆ. ಮೆರೈನ್ ಕಮಾಂಡೋ ಮಾರ್ಕೋಸ್ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.

ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ನಿನ್ನೆ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿತ್ತು. ಇದರಲ್ಲಿ 15 ಭಾರತೀಯರಿದ್ದರು. ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು ಎನ್ನಲಾಗಿದೆ.

ಅರೇಬಿಯನ್ ಸಮುದ್ರದಲ್ಲಿ ಈ ಕಡಲ ಘಟನೆಗೆ ಭಾರತೀಯ ನೌಕಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಇದರಲ್ಲಿ ಲೈಬೀರಿಯನ್ ಧ್ವಜ ಹೊಂದಿರುವ ಹಡಗನ್ನು ಅಪಹರಿಸುವ ಪ್ರಯತ್ನ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಸುಮಾರು ಐದರಿಂದ ಆರು ಅಪರಿಚಿತ ಸಶಸ್ತ್ರ ವ್ಯಕ್ತಿಗಳು ಹಡಗನ್ನು ಹತ್ತಿದ್ದಾರೆ ಎಂದು ಹಡಗು ಯುಕೆಎಂಟಿಒ ಪೋರ್ಟಲ್ಗೆ ಸಂದೇಶ ಕಳುಹಿಸಿದೆ ಎಂದು ಅವರು ಹೇಳಿದರು.

ಅರೇಬಿ ಸಮುದ್ನಾರಕ್ಲ್ಕುಕಿಳಿದ ಭಾರತದ ಶಕ್ತಿಶಾಲಿ  ಮೂರು ಹಡಗು: ಅರಬೀ ಸಮುದ್ರದಲ್ಲಿ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಲು ಭಾರತದ ಐಎನ್‌ಎಸ್‌ ಚೆನೈ, ಐಎನ್‌ಎಸ್‌ ಮರ್ಮಗೋವ ಮತ್ತು ಐಎನ್‌ಎಸ್‌ ವಿಶಾಕಪಟ್ಟಣಂ ಎಂಬ ಮೂರು ಶಕ್ತಿಶಾಲಿ ನೌಕೆಗಳನ್ನು ಸಮುದ್ರಕ್ಕಿಳಿಸಿದೆ. ಅಪಹೃಣಕ್ಕೊಳಗಾಗಿದ್ದ ಎಂ ವಿ ಲೀಲಾ ರಕ್ಷಣೆ ಸೇರಿದಂತೆ ಸರಕು ಸಾಗಾಣೆ ಮಾಡುವ ಹಡಗುಗಳಿಗೆ ರಕ್ಷಣೆ ನೀಡಲಾಗುತ್ತಿದೆ.

 

andolanait

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

2 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

6 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

6 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

7 hours ago