ರಾಷ್ಟ್ರೀಯ

ಎಂವಿ ಲೀಲಾ ಹಡಗು ರಕ್ಷಣೆ: ಭಾರತೀಯರೂ ಸೇರಿದಂತೆ ೨೧ ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ!

 ನವದೆಹಲಿ : ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಸೇರಿದಂತೆ ಒಟ್ಟು ೨೧ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್’ನ್ನ ಸಮೀಪಿಸಿ ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ ಮಾಡುವಂತೆ ಭಾರತೀಯ ನೌಕಾಪಡೆ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಿತು.

ಹಡಗಿನಲ್ಲಿದ್ದ ಭಾರತೀಯ ತಂಡ ಸುರಕ್ಷಿತವಾಗಿದೆ. ಮೆರೈನ್ ಕಮಾಂಡೋ ಮಾರ್ಕೋಸ್ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.

ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ನಿನ್ನೆ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿತ್ತು. ಇದರಲ್ಲಿ 15 ಭಾರತೀಯರಿದ್ದರು. ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು ಎನ್ನಲಾಗಿದೆ.

ಅರೇಬಿಯನ್ ಸಮುದ್ರದಲ್ಲಿ ಈ ಕಡಲ ಘಟನೆಗೆ ಭಾರತೀಯ ನೌಕಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಇದರಲ್ಲಿ ಲೈಬೀರಿಯನ್ ಧ್ವಜ ಹೊಂದಿರುವ ಹಡಗನ್ನು ಅಪಹರಿಸುವ ಪ್ರಯತ್ನ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಸುಮಾರು ಐದರಿಂದ ಆರು ಅಪರಿಚಿತ ಸಶಸ್ತ್ರ ವ್ಯಕ್ತಿಗಳು ಹಡಗನ್ನು ಹತ್ತಿದ್ದಾರೆ ಎಂದು ಹಡಗು ಯುಕೆಎಂಟಿಒ ಪೋರ್ಟಲ್ಗೆ ಸಂದೇಶ ಕಳುಹಿಸಿದೆ ಎಂದು ಅವರು ಹೇಳಿದರು.

ಅರೇಬಿ ಸಮುದ್ನಾರಕ್ಲ್ಕುಕಿಳಿದ ಭಾರತದ ಶಕ್ತಿಶಾಲಿ  ಮೂರು ಹಡಗು: ಅರಬೀ ಸಮುದ್ರದಲ್ಲಿ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಲು ಭಾರತದ ಐಎನ್‌ಎಸ್‌ ಚೆನೈ, ಐಎನ್‌ಎಸ್‌ ಮರ್ಮಗೋವ ಮತ್ತು ಐಎನ್‌ಎಸ್‌ ವಿಶಾಕಪಟ್ಟಣಂ ಎಂಬ ಮೂರು ಶಕ್ತಿಶಾಲಿ ನೌಕೆಗಳನ್ನು ಸಮುದ್ರಕ್ಕಿಳಿಸಿದೆ. ಅಪಹೃಣಕ್ಕೊಳಗಾಗಿದ್ದ ಎಂ ವಿ ಲೀಲಾ ರಕ್ಷಣೆ ಸೇರಿದಂತೆ ಸರಕು ಸಾಗಾಣೆ ಮಾಡುವ ಹಡಗುಗಳಿಗೆ ರಕ್ಷಣೆ ನೀಡಲಾಗುತ್ತಿದೆ.

 

andolanait

Recent Posts

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

9 mins ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

36 mins ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

1 hour ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

3 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

4 hours ago