ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಗಾಂಧಿಯವರು ತಮ್ಮ ಧಾರ್ಮಿಕ ಗುರುತಿನ ಮೇಲಿನ ದ್ವೇಷದಿಂದ ತಮ್ಮ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ, ನನ್ನ ಹೆಸರು ಅಸಾದುದ್ದೀನ್ ಎಂಬ ಕಾರಣಕ್ಕೆ ನೀವು ಈ ಆರೋಪಗಳನ್ನು ಮಾಡುತ್ತಿದ್ದೀರಿ. ನನ್ನ ಮುಖದ ಮೇಲೆ ಗಡ್ಡ ಇರುವುದರಿಂದ ಮತ್ತು ಸ್ಕಲ್ ಕ್ಯಾಪ್ ಹಾಕಿಕೊಂಡಿರುವುದರಿಂದ ನನ್ನ ವಿರುದ್ಧ ಹಣ ಪಡೆದಿರುವ ಆರೋಪಗಳನ್ನು ಮಾಡುತ್ತಿದ್ದೀರಿ ಎಂದಿದ್ದಾರೆ.
ಹೈದರಾಬಾದ್ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವು ಎಲ್ಲಿಯೇ ಚುನಾವಣೆ ಎದುರಿಸಲು ಹೋದರೂ ಅಲ್ಲಿ ಬಿಜೆಪಿಯಿಂದ ಹಣ ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ತ್ರಿಪುರಾ, ಬಿಜೆಪಿಯೊಂದಿಗೆ ಕಾಂಗ್ರೆಸ್ ಪಕ್ಷವು ಎಲ್ಲೇ ಹೋರಾಡುತ್ತದೆಯೋ ಅಲ್ಲಿ ಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿಗಳನ್ನು ಹಾಕುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಹುಲ್ ಯಾರೋ ಬರೆದುಕೊಟ್ಟಿದ್ದನ್ನು ಗಿಳಿಯಂತೆ ಓದುತ್ತಿದ್ದಾರೆ ಎಂದು ಕುಟುಕಿದರು.
2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋಲಲು ನೀವು ಎಷ್ಟು ಹಣವನ್ನು ತೆಗೆದುಕೊಂಡಿದ್ದೀರಿ. 2014 ಮತ್ತು 2019ರ ಚುನಾವಣೆಯಲ್ಲಿ ಸೋಲಲು ನೀವು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೀರಾ? ಎಂದು ರಾಹುಲ್ಗೆ ಪ್ರಶ್ನಿಸಿದ್ದಾರೆ.
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…