ರಾಷ್ಟ್ರೀಯ

ನನ್ನ ಹೆಸರು ಗಡ್ಡ ಟೋಪಿ ನೋಡಿ ರಾಹುಲ್ ಮುಗಿಬಿದ್ದಿದ್ದಾರೆ : ಓವೈಸಿ ಕಿಡಿ

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಗಾಂಧಿಯವರು ತಮ್ಮ ಧಾರ್ಮಿಕ ಗುರುತಿನ ಮೇಲಿನ ದ್ವೇಷದಿಂದ ತಮ್ಮ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ, ನನ್ನ ಹೆಸರು ಅಸಾದುದ್ದೀನ್ ಎಂಬ ಕಾರಣಕ್ಕೆ ನೀವು ಈ ಆರೋಪಗಳನ್ನು ಮಾಡುತ್ತಿದ್ದೀರಿ. ನನ್ನ ಮುಖದ ಮೇಲೆ ಗಡ್ಡ ಇರುವುದರಿಂದ ಮತ್ತು ಸ್ಕಲ್ ಕ್ಯಾಪ್ ಹಾಕಿಕೊಂಡಿರುವುದರಿಂದ ನನ್ನ ವಿರುದ್ಧ ಹಣ ಪಡೆದಿರುವ ಆರೋಪಗಳನ್ನು ಮಾಡುತ್ತಿದ್ದೀರಿ ಎಂದಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವು ಎಲ್ಲಿಯೇ ಚುನಾವಣೆ ಎದುರಿಸಲು ಹೋದರೂ ಅಲ್ಲಿ ಬಿಜೆಪಿಯಿಂದ ಹಣ ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ತ್ರಿಪುರಾ, ಬಿಜೆಪಿಯೊಂದಿಗೆ ಕಾಂಗ್ರೆಸ್ ಪಕ್ಷವು ಎಲ್ಲೇ ಹೋರಾಡುತ್ತದೆಯೋ ಅಲ್ಲಿ ಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿಗಳನ್ನು ಹಾಕುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಹುಲ್‌ ಯಾರೋ ಬರೆದುಕೊಟ್ಟಿದ್ದನ್ನು ಗಿಳಿಯಂತೆ ಓದುತ್ತಿದ್ದಾರೆ ಎಂದು ಕುಟುಕಿದರು.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋಲಲು ನೀವು ಎಷ್ಟು ಹಣವನ್ನು ತೆಗೆದುಕೊಂಡಿದ್ದೀರಿ. 2014 ಮತ್ತು 2019ರ ಚುನಾವಣೆಯಲ್ಲಿ ಸೋಲಲು ನೀವು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೀರಾ? ಎಂದು ರಾಹುಲ್‌ಗೆ ಪ್ರಶ್ನಿಸಿದ್ದಾರೆ.

lokesh

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago