ರಾಷ್ಟ್ರೀಯ

ನನ್ನ ಹೆಸರು ಗಡ್ಡ ಟೋಪಿ ನೋಡಿ ರಾಹುಲ್ ಮುಗಿಬಿದ್ದಿದ್ದಾರೆ : ಓವೈಸಿ ಕಿಡಿ

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಗಾಂಧಿಯವರು ತಮ್ಮ ಧಾರ್ಮಿಕ ಗುರುತಿನ ಮೇಲಿನ ದ್ವೇಷದಿಂದ ತಮ್ಮ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ, ನನ್ನ ಹೆಸರು ಅಸಾದುದ್ದೀನ್ ಎಂಬ ಕಾರಣಕ್ಕೆ ನೀವು ಈ ಆರೋಪಗಳನ್ನು ಮಾಡುತ್ತಿದ್ದೀರಿ. ನನ್ನ ಮುಖದ ಮೇಲೆ ಗಡ್ಡ ಇರುವುದರಿಂದ ಮತ್ತು ಸ್ಕಲ್ ಕ್ಯಾಪ್ ಹಾಕಿಕೊಂಡಿರುವುದರಿಂದ ನನ್ನ ವಿರುದ್ಧ ಹಣ ಪಡೆದಿರುವ ಆರೋಪಗಳನ್ನು ಮಾಡುತ್ತಿದ್ದೀರಿ ಎಂದಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವು ಎಲ್ಲಿಯೇ ಚುನಾವಣೆ ಎದುರಿಸಲು ಹೋದರೂ ಅಲ್ಲಿ ಬಿಜೆಪಿಯಿಂದ ಹಣ ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ತ್ರಿಪುರಾ, ಬಿಜೆಪಿಯೊಂದಿಗೆ ಕಾಂಗ್ರೆಸ್ ಪಕ್ಷವು ಎಲ್ಲೇ ಹೋರಾಡುತ್ತದೆಯೋ ಅಲ್ಲಿ ಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿಗಳನ್ನು ಹಾಕುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಹುಲ್‌ ಯಾರೋ ಬರೆದುಕೊಟ್ಟಿದ್ದನ್ನು ಗಿಳಿಯಂತೆ ಓದುತ್ತಿದ್ದಾರೆ ಎಂದು ಕುಟುಕಿದರು.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋಲಲು ನೀವು ಎಷ್ಟು ಹಣವನ್ನು ತೆಗೆದುಕೊಂಡಿದ್ದೀರಿ. 2014 ಮತ್ತು 2019ರ ಚುನಾವಣೆಯಲ್ಲಿ ಸೋಲಲು ನೀವು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೀರಾ? ಎಂದು ರಾಹುಲ್‌ಗೆ ಪ್ರಶ್ನಿಸಿದ್ದಾರೆ.

lokesh

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

7 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

7 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

8 hours ago