ರಾಷ್ಟ್ರೀಯ

ನನ್ನ ಹೆಸರು ಗಡ್ಡ ಟೋಪಿ ನೋಡಿ ರಾಹುಲ್ ಮುಗಿಬಿದ್ದಿದ್ದಾರೆ : ಓವೈಸಿ ಕಿಡಿ

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಗಾಂಧಿಯವರು ತಮ್ಮ ಧಾರ್ಮಿಕ ಗುರುತಿನ ಮೇಲಿನ ದ್ವೇಷದಿಂದ ತಮ್ಮ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ, ನನ್ನ ಹೆಸರು ಅಸಾದುದ್ದೀನ್ ಎಂಬ ಕಾರಣಕ್ಕೆ ನೀವು ಈ ಆರೋಪಗಳನ್ನು ಮಾಡುತ್ತಿದ್ದೀರಿ. ನನ್ನ ಮುಖದ ಮೇಲೆ ಗಡ್ಡ ಇರುವುದರಿಂದ ಮತ್ತು ಸ್ಕಲ್ ಕ್ಯಾಪ್ ಹಾಕಿಕೊಂಡಿರುವುದರಿಂದ ನನ್ನ ವಿರುದ್ಧ ಹಣ ಪಡೆದಿರುವ ಆರೋಪಗಳನ್ನು ಮಾಡುತ್ತಿದ್ದೀರಿ ಎಂದಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವು ಎಲ್ಲಿಯೇ ಚುನಾವಣೆ ಎದುರಿಸಲು ಹೋದರೂ ಅಲ್ಲಿ ಬಿಜೆಪಿಯಿಂದ ಹಣ ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ತ್ರಿಪುರಾ, ಬಿಜೆಪಿಯೊಂದಿಗೆ ಕಾಂಗ್ರೆಸ್ ಪಕ್ಷವು ಎಲ್ಲೇ ಹೋರಾಡುತ್ತದೆಯೋ ಅಲ್ಲಿ ಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿಗಳನ್ನು ಹಾಕುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಹುಲ್‌ ಯಾರೋ ಬರೆದುಕೊಟ್ಟಿದ್ದನ್ನು ಗಿಳಿಯಂತೆ ಓದುತ್ತಿದ್ದಾರೆ ಎಂದು ಕುಟುಕಿದರು.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋಲಲು ನೀವು ಎಷ್ಟು ಹಣವನ್ನು ತೆಗೆದುಕೊಂಡಿದ್ದೀರಿ. 2014 ಮತ್ತು 2019ರ ಚುನಾವಣೆಯಲ್ಲಿ ಸೋಲಲು ನೀವು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೀರಾ? ಎಂದು ರಾಹುಲ್‌ಗೆ ಪ್ರಶ್ನಿಸಿದ್ದಾರೆ.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 seconds ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

10 hours ago