ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 ಹೊಸ ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಅಮೃತ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಪೈಕಿ ರಾಜ್ಯಕ್ಕೆ ಎರಡು ವಂದೇ ಭಾರತ್ ರೈಲುಗಳು ಲಭಿಸಿದ್ದು, ಒಂದು ರೈಲು ಮಂಗಳೂರು ಹಾಗೂ ಮಡಗಾವ್ಗಳ ನಡುವೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ರೈಲು ಬೆಂಗಳೂರು ಹಾಗೂ ಕೊಯಮತ್ತೂರು ನಡುವೆ ಸಂಚರಿಸಲಿದೆ.
ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಡಲಿರುವ ರೈಲು 11.30ಕ್ಕೆ ಬೆಂಗಳೂರು ತಲುಪಲಿದ್ದು, ಮತ್ತೆ ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರನ್ನು ತಲುಪಲಿದೆ. ಇನ್ನು ಮಂಗಳೂರು – ಮಡಗಾವ್ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಹೊರಟು ಗೋವಾದ ಮಡಗಾವ್ಗೆ 1.15ಕ್ಕೆ ತಲುಪಲಿದ್ದು, ಸಂಜೆ 6.10ಕ್ಕೆ ಮಡಗಾವ್ನಿಂದ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…