ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 ಹೊಸ ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಅಮೃತ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಪೈಕಿ ರಾಜ್ಯಕ್ಕೆ ಎರಡು ವಂದೇ ಭಾರತ್ ರೈಲುಗಳು ಲಭಿಸಿದ್ದು, ಒಂದು ರೈಲು ಮಂಗಳೂರು ಹಾಗೂ ಮಡಗಾವ್ಗಳ ನಡುವೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ರೈಲು ಬೆಂಗಳೂರು ಹಾಗೂ ಕೊಯಮತ್ತೂರು ನಡುವೆ ಸಂಚರಿಸಲಿದೆ.
ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಡಲಿರುವ ರೈಲು 11.30ಕ್ಕೆ ಬೆಂಗಳೂರು ತಲುಪಲಿದ್ದು, ಮತ್ತೆ ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರನ್ನು ತಲುಪಲಿದೆ. ಇನ್ನು ಮಂಗಳೂರು – ಮಡಗಾವ್ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಹೊರಟು ಗೋವಾದ ಮಡಗಾವ್ಗೆ 1.15ಕ್ಕೆ ತಲುಪಲಿದ್ದು, ಸಂಜೆ 6.10ಕ್ಕೆ ಮಡಗಾವ್ನಿಂದ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…