ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 ಹೊಸ ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಅಮೃತ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಪೈಕಿ ರಾಜ್ಯಕ್ಕೆ ಎರಡು ವಂದೇ ಭಾರತ್ ರೈಲುಗಳು ಲಭಿಸಿದ್ದು, ಒಂದು ರೈಲು ಮಂಗಳೂರು ಹಾಗೂ ಮಡಗಾವ್ಗಳ ನಡುವೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ರೈಲು ಬೆಂಗಳೂರು ಹಾಗೂ ಕೊಯಮತ್ತೂರು ನಡುವೆ ಸಂಚರಿಸಲಿದೆ.
ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಡಲಿರುವ ರೈಲು 11.30ಕ್ಕೆ ಬೆಂಗಳೂರು ತಲುಪಲಿದ್ದು, ಮತ್ತೆ ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರನ್ನು ತಲುಪಲಿದೆ. ಇನ್ನು ಮಂಗಳೂರು – ಮಡಗಾವ್ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಹೊರಟು ಗೋವಾದ ಮಡಗಾವ್ಗೆ 1.15ಕ್ಕೆ ತಲುಪಲಿದ್ದು, ಸಂಜೆ 6.10ಕ್ಕೆ ಮಡಗಾವ್ನಿಂದ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…