ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 ಹೊಸ ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಅಮೃತ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಪೈಕಿ ರಾಜ್ಯಕ್ಕೆ ಎರಡು ವಂದೇ ಭಾರತ್ ರೈಲುಗಳು ಲಭಿಸಿದ್ದು, ಒಂದು ರೈಲು ಮಂಗಳೂರು ಹಾಗೂ ಮಡಗಾವ್ಗಳ ನಡುವೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ರೈಲು ಬೆಂಗಳೂರು ಹಾಗೂ ಕೊಯಮತ್ತೂರು ನಡುವೆ ಸಂಚರಿಸಲಿದೆ.
ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಡಲಿರುವ ರೈಲು 11.30ಕ್ಕೆ ಬೆಂಗಳೂರು ತಲುಪಲಿದ್ದು, ಮತ್ತೆ ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರನ್ನು ತಲುಪಲಿದೆ. ಇನ್ನು ಮಂಗಳೂರು – ಮಡಗಾವ್ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಹೊರಟು ಗೋವಾದ ಮಡಗಾವ್ಗೆ 1.15ಕ್ಕೆ ತಲುಪಲಿದ್ದು, ಸಂಜೆ 6.10ಕ್ಕೆ ಮಡಗಾವ್ನಿಂದ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…