ಉದ್ಯಮಿ ಮುಕೇಶ್ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.
ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮ್ಮಿಟ್ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದಾರೆ.
“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್ ಅಂಬಾನಿ ತಿಳಿಸಿದ್ದಾರೆ.
“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…