ಉದ್ಯಮಿ ಮುಕೇಶ್ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.
ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮ್ಮಿಟ್ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದಾರೆ.
“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್ ಅಂಬಾನಿ ತಿಳಿಸಿದ್ದಾರೆ.
“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…