ರಾಷ್ಟ್ರೀಯ

ಭಾರತದ ಇತಿಹಾಸದಲ್ಲೇ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ: ಮುಕೇಶ್‌ ಅಂಬಾನಿ

ಉದ್ಯಮಿ ಮುಕೇಶ್‌ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್‌ ಗುಜರಾತ್‌ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.

ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್‌ ಗುಜರಾತ್‌ ಸಮ್ಮಿಟ್‌ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್‌ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್‌ ಅಂಬಾನಿ ಹೇಳಿಕೆ ನೀಡಿದ್ದಾರೆ.

“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್‌ ಅಂಬಾನಿ ತಿಳಿಸಿದ್ದಾರೆ.

“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್​ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್‌ ಅಂಬಾನಿ ಭವಿಷ್ಯ ನುಡಿದಿದ್ದಾರೆ.

andolana

Recent Posts

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

10 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

14 mins ago

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…

17 mins ago

ಪ್ರಧಾನಿ ನರೇಂದ್ರ ಮೋದಿ ದೇಶವನ್ನೇ ಮಾಡಿದ್ದಾರೆ: ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ…

19 mins ago

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್ಎಸ್ಎಲ್‍ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ…

22 mins ago

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…

40 mins ago