ಉದ್ಯಮಿ ಮುಕೇಶ್ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.
ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮ್ಮಿಟ್ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದಾರೆ.
“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್ ಅಂಬಾನಿ ತಿಳಿಸಿದ್ದಾರೆ.
“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…