ಉದ್ಯಮಿ ಮುಕೇಶ್ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.
ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮ್ಮಿಟ್ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದಾರೆ.
“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್ ಅಂಬಾನಿ ತಿಳಿಸಿದ್ದಾರೆ.
“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…