ರಾಷ್ಟ್ರೀಯ

ನೆಹರು ಮೀಸಲಾತಿ ವಿರೋಧಿಯಾಗಿದ್ದರು: ನರೇಂದ್ರ ಮೋದಿ

ಬಜೆಟ್‌ ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಕಡು ಟೀಕೆ ಮಾಡಿದ್ದಾರೆ.

ತಮ್ಮ ಅಧಿಕಾರದ ಸರ್ಕಾರದ ಕಳೆದ ಹತ್ತು ವರ್ಷಗಳಿಗೂ ಹಾಗೂ ಕಾಂಗ್ರೆಸ್‌ ಸರ್ಕಾರದ ಆಡಳಿತದ ಕೊನೆಯ ಹತ್ತು ವರ್ಷಗಳಿಗೂ ಹೋಲಿಕೆ ಮಾಡಿದ ಮೋದಿ ತಮ್ಮ ಅವಧಿಯನ್ನು ಜನರು ದೊಡ್ಡ ಹಾಗೂ ದೃಢ ನಿರ್ಧಾರಗಳಿಗಾಗಿ ನೆನಪಿಸಿಕೊಳ್ಳುತ್ತಾರೆ ಎಂದರು.

ಕಾಂಗ್ರೆಸ್‌ ಪಕ್ಷ ಒಂದು ಕುಟುಂಬದ ಹಿಡಿತದಲ್ಲಿ ಸಿಲುಕಿತ್ತು ಎಂದು ಆರೋಪಿಸಿದ ಮೋದಿ ಅಧಿಕಾರದ ದಾಹವನ್ನೊಂದಿತ್ತು ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಬಹಿರಂಗವಾಗಿ ಪ್ರಜಾಪ್ರಭುತ್ವದ ಕತ್ತು ಹಿಸುಕಿತ್ತು. ರಾತ್ರೋರಾತ್ರಿ ಪ್ರಜಾಸತ್ತಾತ್ಮಕವಾಗಿ ಅಧಿಕಾರ ಹಿಡಿದಿದ್ದ ಸರ್ಕಾರಗಳನ್ನು ವಿಸರ್ಜಿಸಿತ್ತು. ಸಂವಿಧಾನ ಶಿಷ್ಟಾಚಾರಗಳನ್ನು ಜೈಲಿಗೆ ಹಾಕಿ ಪತ್ರಿಕೆಗಳಿಗೆ ಬೀಗ ಹಾಕುವ ಯತ್ನ ಮಾಡಿತ್ತು ಎಂದರು.

ಇಷ್ಟು ಮಾತ್ರವಲ್ಲದೇ ಇದೀಗ ದಕ್ಷಿಣ ಹಾಗೂ ಉತ್ತರ ಎಂದು ದೇಶ ಒಡೆಯುವ ಕೆಲಸಕ್ಕೆ ಕೈಹಾಕಿರುವ ಕಾಂಗ್ರೆಸ್‌ ನಮಗೆ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯ ಪಾಠ ಮಾಡುತ್ತಿದೆ ಎಂದು ಕಾಲೆಳೆದರು. ಕಾಂಗ್ರೆಸ್‌ ಸರ್ಕಾರ ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡಲಿಲ್ಲ. ಸಾಮಾನ್ಯ ವರ್ಗದ ಜನರಿಗೆ ಮೀಸಲಾತಿ ನೀಡದ ಕಾಂಗ್ರೆಸ್‌ ಅಂಬೇಡ್ಕರ್‌ಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ತಮ್ಮ ಕುಟುಂಬಕ್ಕೆ ಮಾತ್ರ ಭಾರತ ರತ್ನವನ್ನು ನೀಡುತ್ತಲೇ ಬಂದಿದೆ. ನಾಯಕರಾಗಿ ಯಾವುದೇ ಗ್ಯಾರಂಟಿ ಇಲ್ಲದವರು ಮೋದಿ ಖಾತರಿ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಮೋದಿ ಕಿಡಿಕಾರಿದ್ದಾರೆ.

ಇನ್ನು ಜನಹರಲಾಲ್‌ ನೆಹರೂ ಬಗ್ಗೆ ಮಾತನಾಡಿದ ಮೋದಿ ʼನೆಹರೂ ಒಮ್ಮೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಅದರಲ್ಲಿ ಮೀಸಲಾತಿಗೆ ವಿರೋಧಿ ಹೇಳಿಕೆಗಳನ್ನು ನೀಡಿದ್ದರು. ಮೀಸಲಾತಿ ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆಯನ್ನು ಕುಂಟಿಗೊಳಿಸುವಂತೆ ಮಾಡುತ್ತದೆ. ಅರ್ಹತೆ ಇಲ್ಲದವರನ್ನು ಅಧಿಕಾರಕ್ಕೆ ತರುತ್ತದೆ ಎಂದು ಬರೆದಿದ್ದರುʼ ಎಂದು ಹೇಳಿದರು.

ಎಸ್‌ಟಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ದೊರೆತರೆ ಸರ್ಕಾರದ ಕೆಲಸದ ಗುಣಮಟ್ಟ ಕುಸಿಯುತ್ತದೆ ಎಂದು ನೆಹರೂ ಹೇಳುತ್ತಿದ್ದರು. ನೇಮಕಾತಿಗಳನ್ನೂ ಸಹ ನಿಲ್ಲಿಸಿದ್ದರು. ಇಂತಹ ಉದಾಹರಣೆಗಳು ಕಾಂಗ್ರೆಸ್‌ ಮನಸ್ಥಿತಿ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್‌ ಯಾವಾಗಲೂ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ. ನಾವು ಹಿಂದುಳಿದ ವರ್ಗಗಳಿಗೆ ಯಾವಾಗಲೂ ಆದ್ಯತೆ ನೀಡಿದ್ದೇವೆ ಎಂದರು. ಈ ವೇಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ್ದು ತಮ್ಮ ಸರ್ಕಾರ ಎಂದೂ ಸಹ ಮೋದಿ ಉಲ್ಲೇಖಿಸಿದರು.

andolana

Recent Posts

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

17 mins ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

47 mins ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

9 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

10 hours ago