ರಾಷ್ಟ್ರೀಯ

ಬಜೆಟ್‌ ಅಧಿವೇಶನ: ಅಮಾನತ್ತಾಗಿದ್ದ ಸಂಸದರಿಗೆ ಮೋದಿ ವಾರ್ನಿಂಗ್‌

ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 ) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನವೇ ಮೋದಿ ಅಮಾನತ್ತಾಗಿದ್ದ ಸಂಸದರಿಗೆ ಬುದ್ಧಿ ಮಾತನ್ನು ಹೇಳಿ ಎಚ್ಚರಿಕೆ ನೀಡಿದ್ದಾರೆ.

ಸಂಸತ್‌ಗೆ ಧನಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಹೊರತು ದಾಂಧಲೆ ನಡೆಸಿದವರನ್ನು ನೆನಪು ಮಾಡಿಕೊಳ್ಳುವುದು ಕಡಿಮೆ. ಹೀಗಾಗಿ ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸಂಸದರಿಗೆ ಧನಾತ್ಮಕ ಹೆಜ್ಜೆ ಇಡಲು ಅವಕಾಶ ಸಿಕ್ಕಿದೆ. ಅದನ್ನು ಅತ್ಯುತ್ತಮವಾಗಿ ಹಾಗೂ ಧನಾತ್ಮಕವಾಗಿ ಬಳಸಿಕೊಳ್ಳಬೇಕು, ಕೈಚೆಲ್ಲಬಾರದು ಎಂದು ಕರೆ ನೀಡಿದ್ದಾರೆ.

ಸಂಸದೀಯ ಮೌಲ್ಯಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಭಗ್ನಗೊಳಿಸುವ ಹವ್ಯಾಸ ಇರುವ ಸಂಸದರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಸಂಸತ್‌ ಅವಧಿಯಲ್ಲಿ ತಾವು ಏನೆಲ್ಲಾ ಮಾಡಿದ್ದೇವೆ ಎಂಬುದರ ಸಿಂಹಾವಲೋಕನ ಮಾಡಿಕೊಳ್ಳಬೇಕು ಎಂದೂ ಸಹ ಪ್ರಧಾನಮಂತ್ರಿ ಹೇಳಿಕೆ ನೀಡಿದ್ದಾರೆ.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಕುರಿತು ಮಾತನಾಡಿದ ಮೋದಿ ಬಜೆಟ್‌ ಅಧಿವೇಶನ ಪ್ರಾರಂಭವಾದಾಗ ಮುರ್ಮು ಅವರ ಮಾರ್ಗದರ್ಶನ ಹಾಗೂ ನಾಳೆ ನಿರ್ಮಲಾ ಸೀತಾರಾಮನ್‌ ಮಧ್ಯಂತರ ಬಜೆಟ್‌ ಮಂಡಿಸುವಾಗ ಒಂದು ರೀತಿಯಲ್ಲಿ ಇದು ನಾರಿ ಶಕ್ತಿಯ ಹಬ್ಬವಾಗಲಿದೆ ಎಂದು ಬಣ್ಣಿಸಿದರು.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

6 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago