ರಾಷ್ಟ್ರೀಯ

ಬಜೆಟ್‌ ಅಧಿವೇಶನ: ಅಮಾನತ್ತಾಗಿದ್ದ ಸಂಸದರಿಗೆ ಮೋದಿ ವಾರ್ನಿಂಗ್‌

ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 ) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನವೇ ಮೋದಿ ಅಮಾನತ್ತಾಗಿದ್ದ ಸಂಸದರಿಗೆ ಬುದ್ಧಿ ಮಾತನ್ನು ಹೇಳಿ ಎಚ್ಚರಿಕೆ ನೀಡಿದ್ದಾರೆ.

ಸಂಸತ್‌ಗೆ ಧನಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಹೊರತು ದಾಂಧಲೆ ನಡೆಸಿದವರನ್ನು ನೆನಪು ಮಾಡಿಕೊಳ್ಳುವುದು ಕಡಿಮೆ. ಹೀಗಾಗಿ ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸಂಸದರಿಗೆ ಧನಾತ್ಮಕ ಹೆಜ್ಜೆ ಇಡಲು ಅವಕಾಶ ಸಿಕ್ಕಿದೆ. ಅದನ್ನು ಅತ್ಯುತ್ತಮವಾಗಿ ಹಾಗೂ ಧನಾತ್ಮಕವಾಗಿ ಬಳಸಿಕೊಳ್ಳಬೇಕು, ಕೈಚೆಲ್ಲಬಾರದು ಎಂದು ಕರೆ ನೀಡಿದ್ದಾರೆ.

ಸಂಸದೀಯ ಮೌಲ್ಯಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಭಗ್ನಗೊಳಿಸುವ ಹವ್ಯಾಸ ಇರುವ ಸಂಸದರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಸಂಸತ್‌ ಅವಧಿಯಲ್ಲಿ ತಾವು ಏನೆಲ್ಲಾ ಮಾಡಿದ್ದೇವೆ ಎಂಬುದರ ಸಿಂಹಾವಲೋಕನ ಮಾಡಿಕೊಳ್ಳಬೇಕು ಎಂದೂ ಸಹ ಪ್ರಧಾನಮಂತ್ರಿ ಹೇಳಿಕೆ ನೀಡಿದ್ದಾರೆ.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಕುರಿತು ಮಾತನಾಡಿದ ಮೋದಿ ಬಜೆಟ್‌ ಅಧಿವೇಶನ ಪ್ರಾರಂಭವಾದಾಗ ಮುರ್ಮು ಅವರ ಮಾರ್ಗದರ್ಶನ ಹಾಗೂ ನಾಳೆ ನಿರ್ಮಲಾ ಸೀತಾರಾಮನ್‌ ಮಧ್ಯಂತರ ಬಜೆಟ್‌ ಮಂಡಿಸುವಾಗ ಒಂದು ರೀತಿಯಲ್ಲಿ ಇದು ನಾರಿ ಶಕ್ತಿಯ ಹಬ್ಬವಾಗಲಿದೆ ಎಂದು ಬಣ್ಣಿಸಿದರು.

andolana

Recent Posts

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

41 mins ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

4 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

4 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

4 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

4 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

15 hours ago