ರಾಷ್ಟ್ರೀಯ

ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ; ರಾಹುಲ್ ಗಾಂಧಿ ಗಂಭೀರ ಆರೋಪ

ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್‌ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್‌ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಟಾಂಗ್‌ ನೀಡಲು ಯತ್ನಿಸಿರುವ ರಾಹುಲ್‌ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್‌ ಜೋಡ್‌ ನ್ಯಾಯ್‌ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್‌ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್‌ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್‌ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.

andolana

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

22 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

41 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

5 hours ago