ರಾಷ್ಟ್ರೀಯ

ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ; ರಾಹುಲ್ ಗಾಂಧಿ ಗಂಭೀರ ಆರೋಪ

ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್‌ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್‌ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಟಾಂಗ್‌ ನೀಡಲು ಯತ್ನಿಸಿರುವ ರಾಹುಲ್‌ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್‌ ಜೋಡ್‌ ನ್ಯಾಯ್‌ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್‌ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್‌ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್‌ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.

andolana

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago